Saturday, 20 December 2014
Wednesday, 10 December 2014
Saturday, 6 December 2014
ಚಾಂಪಿಯನ್ಸ್...........
ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವದಲ್ಲಿ ದೇಶಭಕ್ತಿಗೀತೆ, ಗುಂಪು ಸಂಗೀತ, ಕಂಠಪಾಠ, ಚಿತ್ರ ರಚನೆ, ಜಲವರ್ಣ, ಲಘ ಸಂಗೀತ, ಶಾಸ್ತ್ರೀಯ ಸಂಗೀತ ಈ ಎಲ್ಲಾ ಸ್ಪರ್ಧೆಗಳಲ್ಲಿ 'A' ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಹಾಗೂ ಒಗಟು ಸ್ಪರ್ಧೆ, ಭರತನಾಟ್ಯ ಹಾಗೂ ಜಾನಪದ ನೃತ್ಯ ಸ್ಪರ್ಧೆಗಳಲ್ಲಿ 'A' ಗ್ರೇಡ್ ನೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದು L.P. ಕನ್ನಡ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿ ಹಾಗೂ L.P. ಜನರಲ್ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ತಂದು ಕೊಟ್ಟ S.A.T.L.P. ಶಾಲೆ ಮಂಜೇಶ್ವರದ ವಿದ್ಯಾರ್ಥಿಗಳು ಅಧ್ಯಾಪಕ ವೃಂದದವರೊಂದಿಗೆ.
Monday, 1 December 2014
Friday, 14 November 2014
Wednesday, 12 November 2014
Thursday, 6 November 2014
Tuesday, 4 November 2014
Wednesday, 29 October 2014
Thursday, 23 October 2014
Friday, 17 October 2014
Sunday, 5 October 2014
Friday, 3 October 2014
Tuesday, 30 September 2014
ತರಗತಿಯ ರಕ್ಷಕ – ಶಿಕ್ಷಕ ಸಂಘದ ಸಭೆ
ತರಗತಿಯ ರಕ್ಷಕ – ಶಿಕ್ಷಕ ಸಂಘದ ಸಭೆಗಳು 30.09.2014 ರಂದು ಜರಗಿತು. ಎಲ್ಲಾ ತರಗತಿಯಲ್ಲೂ ಆಯಾ ತರಗತಿ ಅಧ್ಯಾಪಕರು ಸಭೆಯ ನೇತೃತ್ವವನ್ನು ವಹಿಸಿದರು. ಪ್ರಥಮ ಹಂತದ ಮೌಲ್ಯ ಮಾಪನದ ಉತ್ತರ ಪತ್ರಿಕೆಯನ್ನು ಹೆತ್ತವರಿಗೆ ನೀಡಲಾಯಿತು. ಅಲ್ಲದೆ ಮಕ್ಕಳ ಕಲಿಕಾ ಮಟ್ಟದ ಬಗ್ಗೆ ವಿವರಿಸಿ ಹೇಳಲಾಯಿತು. ಮಕ್ಕಳ ಬಗ್ಗೆ ಹೆಚ್ಚಿನ ಜವಾಬ್ದಾರಿಯನ್ನು ವಹಿಸುವಂತೆ ತಿಳಿಸಲಾಯಿತು. ಕಲಿಕಾ ಅಭಿವೃದ್ದಿ ದಾಖಲೆಗೆ ಹೆತ್ತವರ ಸಹಿ ಪಡೆಯಲಾಯಿತು.ಹೆತ್ತವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.
Monday, 29 September 2014
Monday, 15 September 2014
ಸುರಕ್ಷಾ ವಿಮಾ ಯೋಜನೆಯ ಉದ್ಘಾಟನೆ
ರೋಟರಿ ಕ್ಲಬ್ ಮಂಗಳೂರು ಹಾಗೂ ಎಸ್. ಎ. ಟಿ.ಪ್ರೌಢ ಶಾಲೆಯ ರಕ್ಷಕ – ಶಿಕ್ಷಕ ಸಂಘ ಇದರ ಜಂಟಿ ಆಶ್ರಯದಲ್ಲಿ ಮಕ್ಕಳ ಸುರಕ್ಷಾ ವಿಮಾ ಯೋಜನೆಯ ಉದ್ಘಾಟನೆಯನ್ನು ರೋಟರಿ ಕ್ಲಬ್ ಮಂಗಳೂರು ಇದರ ಅಧ್ಯಕ್ಷರಾದ ಏಕನಾಥ ದಂಡೇರಿ ಅವರು ವಿಮಾ ಯೋಜನೆಯ ಅವಶ್ಯಕತೆ ಮತ್ತು ಪ್ರಯೋಜನದ ಬಗ್ಗೆ ವಿವರವನ್ನು ನೀಡಿ , ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಸುದತಿ.ಬಿ ಇವರಿಗೆ ಔಪಚಾರಿಕವಾಗಿ ವಿಮಾ ಪಾಲಿಸಿ ನೀಡುವುದರ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರೌಢ ಶಾಲಾ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾದ ನಿತಿನ್ ಚಂದ್ರ ಪೈ, ಕಿರಿಯ ಪ್ರಾಥಮಿಕ ಶಾಲೆಯ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾದ ಪುತ್ತಬ್ಬ ಕುಂಜತ್ತೂರು, ಮಂಜೇಶ್ವರ ಗ್ರಾಮಪಂಚಾಯತ್ ಸದಸ್ಯರಾದ ಹರಿಶ್ಚಂದ್ರ , ಎಂ ವಿಠಲ ದಾಸ್ ಭಟ್, ಅನಿಲ್ ಬಾಳಿಗ, ಸಲಹಾ ಸಮಿತಿ ಸದಸ್ಯೆ ಲಿಲ್ಲಿ ಬಾಯಿ ಟೀಚರ್ ಮುಂತಾದವರು ಉಪತ್ಥಿತರಿದ್ದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯನಿ ಮನೋರಮ ಕಿಣಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಸುದತಿ.ಬಿ ವಂದಿಸಿದರು. ಶಿಕ್ಷಕ ವಿರೇಶ್ವರ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.
Thursday, 11 September 2014
ಆಧುನಿಕತೆಯತ್ತ ತರಗತಿ ಕೋಣೆಗಳು.......
ನೂತನ ಪ್ರೋಜೆಕ್ಟರ್ ಮತ್ತು ಕ್ಯಾಮರ ಹಸ್ತಾಂತರ
ಎಸ್. ಎ.ಟಿ ಶಾಲೆಯ ಹಳೆ ವಿದ್ಯಾರ್ಥಿಯಾಗಿರುವ ಅಪ್ಪುಸ ಅಲಿಯಾಸ್ ರಾಧ ಪೈ ತಮ್ಮ ಪತಿಯವರಾದ ದಿI ಶ್ರೀ ಕೆ. ಪಾಂಡುರಂಗ ಕಾಮತ್ ರವರ ಸ್ಮರಣಾರ್ಥಕವಾಗಿ ನೀಡಿದ ನೂತನ ಪ್ರೊಜೆಕ್ಟರ್ ಮತ್ತು ಕ್ಯಾಮರ ಹಸ್ತಾಂತರ ಕಾರ್ಯಕ್ರಮವು ಎಸ್. ಎ. ಟಿ ಶಾಲೆಯ ಅನಂತ ವಿಧ್ಯಾ ಸಭಾಂಗಣದಲ್ಲಿ ಇತ್ತೀಚೆಗೆ ಜರಗಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತ್ ಅನಂತೇಶ್ವರ ದೇವಳದ ಕೋಶಾಧಿಕಾರಿಯಾದ ಸುರೇಶ್ ಶೆಣೈ ವಹಿಸಿದರು. ಈ ಸಂದರ್ಭದಲ್ಲಿ ಶಾಲಾ ಪ್ರಬಂಧಕರಾದ ದಿನೇಶ್ ಶೆಣೈ ಅವರು ದಾನಿ 90 ವರ್ಷಪ್ರಾಯದ ಅಪ್ಪುಸ ಅಲಿಯಾಸ್ ರಾಧ ಪೈ ಅವರನ್ನು ಸನ್ಮಾನಿಸಿದರು. ಪ್ರೌಢ ಶಾಲಾ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾದ ನಿತಿನ್ ಚಂದ್ರ ಪೈ, ಕಿರಿಯ ಪ್ರಾಥಮಿಕ ಶಾಲೆಯ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾದ ಪುತ್ತಬ್ಬ ಕುಂಜತ್ತೂರು, ಮಂಜೇಶ್ವರ ಗ್ರಾಮಪಂಚಾಯತ್ ಸದಸ್ಯರಾದ ಹರಿಶ್ಚಂದ್ರ , ಎಂ. ವಿಠಲ ದಾಸ್ ಭಟ್, ಅನಿಲ್ ಬಾಳಿಗ, ಸಲಹಾ ಸಮಿತಿ ಸದಸ್ಯೆ ಲಿಲ್ಲಿ ಬಾಯಿ ಟೀಚರ್ ಮುಂತಾದವರು ಉಪಸ್ಥಿತರಿದ್ದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯನಿ ಮನೋರಮ ಕಿಣಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಸುದತಿ.ಬಿ ವಂದಿಸಿದರು. ಶಿಕ್ಷಕ ವಿರೇಶ್ವರ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.
Monday, 8 September 2014
Thursday, 28 August 2014
Friday, 22 August 2014
Thursday, 21 August 2014
Tuesday, 19 August 2014
Sunday, 17 August 2014
ಸಂಭ್ರಮದ 68ನೇ ಸ್ವಾತಂತ್ರ್ಯೋತ್ಸವ
ಎಸ್.ಎ.ಟಿ ವಿದ್ಯಾಲಯದಲ್ಲಿ 68ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಶಾಲಾ ಪ್ರಬಂಧಕರಾದ ಶ್ರೀ ದಿನೇಶ್ ಶೆಣೈ.ಎ೦ ಧ್ವಜಾರೋಹಣಗೈದು ಶುಭ ಸಂದೇಶಗಳನ್ನು ನೀಡಿದರು. ವಾರ್ಡ್ ಸದಸ್ಯರಾದ ಶ್ರೀ ಆನಂದ ಮಾಸ್ತರ್ ಶುಭ ಕೋರಿದರು. ಹೈಸ್ಕೂಲ್ ವಿಭಾಗದ ಪಿ.ಟಿ.ಎ ಉಪಾಧ್ಯಕ್ಷೆ ಶ್ರೀಮತಿ ಹೆಮಲತಾ, ಎಲ್.ಪಿ ವಿಭಾಗದ ಪಿ.ಟಿ.ಎ ಅಧ್ಯಕ್ಷರಾದ ಶ್ರೀ ಪುತ್ತಬ್ಬ ಕುಂಜತ್ತೂರು, ಮದರ್ ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಶಾರದ, ಮುಖ್ಯೋಪಾಧ್ಯಾಯಿನಿಯವರುಗಳಾದ ಶ್ರೀಮತಿ ಮನೋರಮಾ ಕಿಣಿ, ಶ್ರೀಮತಿ ಸುದತಿ.ಬಿ, ಸಲಹಾ ಸಮಿತಿ ಸದಸ್ಯೆ ಶ್ರೀಮತಿ ಲಿಲ್ಲಿ ಬಾಯಿ ಟೀಚರ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ನೃತ್ಯ, ಸ್ಥಬ್ದ ಚಿತ್ರ ಪ್ರದರ್ಶನ, ದೇಶ ಭಕ್ತಿಗೀತೆ, ಛದ್ಮವೇಶ, ಸ್ಕೌಟ್-ಗೈಡ್ ದಳದ ಕವಾಯತುಗಳನ್ನು ನಡೆಸಲಾಯಿತು. ಹೆಚ್ಚಿನ ಮಕ್ಕಳು, ಸಿಬ್ಬಂದಿವರ್ಗದವರು, ಮಕ್ಕಳ ರಕ್ಷಕರು , ಶಾಲಾಭಿಮಾನಿಗಳು ಉಪಸ್ಥಿತರಿದ್ದರು. 2013-14ರ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉನ್ನತ ಅಂಕಗಳನ್ನು ಸಂಪಾದಿಸಿದ ಪ್ರತಿಭಾನ್ವಿತರಿಗೆ ನಗದು ಪುರಸ್ಕಾರವನ್ನೂ, ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಶಾಲಾ ಸಮಾಜ ಶಾಸ್ತ್ರದ ಕ್ಲಬ್ಬಿನ ಕನ್ವೀನರ್ ಶ್ರೀಮತಿ ಮೋಹಿನಿ ಟೀಚರ್ ಸ್ವಾಗತಿಸಿದರು. ಹಿರಿಯ ಅಧ್ಯಾಪಕರಾದ ಶ್ರೀ ಪುಂಡಲೀಕ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಎಸ್.ಆರ್.ಜಿ ಸಂಚಾಲಕರಾದ ಶ್ರೀ ಕಿರಣ್ ಕುಮಾರ್ ವಂದನಾರ್ಪಣೆಗೈದರು. ತದನಂತರ ಉದಾರ ದಾನಿಯೂ , ಜೋತಿಷ್ಯರಾದ ಶ್ರೀ ಛತ್ರಪತಿ ಪ್ರಭು ಪ್ರತಿ ವರ್ಷದಂತೆ ಈ ವರ್ಷವೂ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ವಿತರಿಸಿದರು.
Friday, 15 August 2014
Tuesday, 12 August 2014
Friday, 8 August 2014
ಶಾಂತಿ ಸಹಬಾಳ್ವೆಯಿಂದ ಸುಂದರ ಭವಿಷ್ಯ
ಯುದ್ಧ ವಿರೋಧಿ ದಿನಾಚರಣೆ
6. 8.2014 ಹಿರೋಶಿಮ ದಿನ ಮತ್ತು 9.8.2014 ನಾಗಸಾಕಿ ದಿನದ ಅಂಗವಾಗಿ 8.8.2014 ರಂದು ಯುದ್ಧ ವಿರೋಧಿ ದಿನವನ್ನು ಆಚರಿಸಲಾಯಿತು. ಯುದ್ಧದಿಂದ ಉಂಟಾಗುವ ನಾಶ ನಷ್ಟಗಳ ಕುರಿತಾಗಿ ವಿವರಿಸಿ ಹೇಳಲಾಯಿತು. ಪ್ರತಿಯೊಬ್ಬರು ಶಾಂತಿಯನ್ನು ಪಾಲಿಸಬೇಕಾದ ಅಗತ್ಯತೆಯನ್ನು ತಿಳಿಹೇಳಲಾಯಿತು. ಯುದ್ಧದ ಭೀಕರತೆ, ದುಷ್ಪರಿಣಾಮಗಳನೊಳ್ಳಗೊಂಡ ವಿಡಿಯೋವನ್ನು ಮೂಲಕ ಪ್ರದರ್ಶಿಸಲಾಯಿತು.
Thursday, 7 August 2014
Saturday, 26 July 2014
Subscribe to:
Posts (Atom)
-
ತರಗತಿಯ ರಕ್ಷಕ – ಶಿಕ್ಷಕ ಸಂಘದ ಸಭೆಗಳು 30.09.2014 ರಂದು ಜರಗಿತು. ಎಲ್ಲಾ ತರಗತಿಯಲ್ಲೂ ಆಯಾ ತರಗತಿ ಅಧ್ಯಾಪಕರು ಸಭೆಯ ನೇತೃತ್ವವನ್ನು ವಹಿಸಿದ...