Thursday 7 August 2014

ಮುನ್ನಡೆಯತ್ತ ಕಲಿಕೆ......

ಸಾಕ್ಷರ 2014 ಪ್ರಾರಂಭ
              ಎಸ್. . ಟಿ. ಎಲ್. ಪಿ. ವಿದ್ಯಾಲಯದಲ್ಲಿ ಸಾಕ್ಷರ 2014 ಕಾರ್ಯಕ್ರಮದ ಉದ್ಘಾಟನೆಯು ಅನಂತ ವಿದ್ಯಾ ಸಭಾಂಗಣದಲ್ಲಿ ವಾರ್ಡ್ ಸದಸ್ಯರಾದ ಆನಂದ ಮಾಸ್ತರ್ ರವರಿಂದ ನೇರವೇರಿತು. ಪ್ರೌಢ ಶಾಲಾ ರಕ್ಷಕ- ಶಿಕ್ಷಕ ಸಂಘದ ಅಧ್ಯಕ್ಷರಾದ ನಿತಿನ್ ಚಂದ್ರ ಪೈ ಅಧ್ಯಕ್ಷತೆಯನ್ನು ವಹಿಸಿ ಶುಭಕೋರಿದರು. ಬಿ.ಆರ್.ಸಿ. ತರಬೇತುದಾರರಾದ ರಮ್ಯ ಟೀಚರ್ ಪ್ರಾಸ್ತಾವಿಕವಾಗಿ ನುಡಿದರು. ಶಾಲಾಮಟ್ಟದಲ್ಲಿ ಸದ್ರಿಯೋಜನೆಯನ್ನು ಕಾರ್ಯಗತಗೊಳಿಸುವ ಮಾಹಿತಿಯನ್ನು ಪ್ರೌಢ ಶಾಲಾ ಮುಖ್ಯೋಪಾದ್ಯಾಯಿನಿ ಮನೋರಮ ಕಿಣಿ ಒದಗಿಸಿದರು. ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಯೋಜನೆಯನ್ನು ಕಾರ್ಯಗತಗೊಳಿಸುವ ಮಾಹಿತಿಯನ್ನು ಕಿರಿಯ ಪ್ರಾಥಮಿಕ ಮುಖ್ಯೋಪಾದ್ಯಾಯಿನಿ ಸುದತಿ. ಬಿ. ವಿವರನೀಡಿದರು. ಸಭೆಯಲ್ಲಿ ನರ್ಸರಿ ಮುಖ್ಯಸ್ಥೆ ಲಿಲ್ಲಿ ಬಾಯಿ , ಪ್ರೌಢ ಶಾಲಾ ರಕ್ಷಕ- ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಹೇಮಲತ , ಕಿರಿಯ ಪ್ರಾಥಮಿಕ ರಕ್ಷಕ- ಶಿಕ್ಷಕ ಸಂಘದ ಅಧ್ಯಕ್ಷರಾದ ಪುತ್ತಬ್ಬ ಕುಂಜತ್ತೂರು ಹಾಗೂ ಮಕ್ಕಳ ರಕ್ಷಕರು ಉಪಸ್ಥಿತರಿದ್ದರು. ಹಿರಿಯ ಅಧ್ಯಾಪಕರಾದ ಪುಂಡಲೀಕ್ ನಾಯಕ್ ಸ್ವಾಗತಿಸಿ ವಂದಿಸಿದರು.

No comments:

Post a Comment

ಗಣರಾಜ್ಯೋತ್ಸವ