Tuesday, 30 September 2014
ತರಗತಿಯ ರಕ್ಷಕ – ಶಿಕ್ಷಕ ಸಂಘದ ಸಭೆ
ತರಗತಿಯ ರಕ್ಷಕ – ಶಿಕ್ಷಕ ಸಂಘದ ಸಭೆಗಳು 30.09.2014 ರಂದು ಜರಗಿತು. ಎಲ್ಲಾ ತರಗತಿಯಲ್ಲೂ ಆಯಾ ತರಗತಿ ಅಧ್ಯಾಪಕರು ಸಭೆಯ ನೇತೃತ್ವವನ್ನು ವಹಿಸಿದರು. ಪ್ರಥಮ ಹಂತದ ಮೌಲ್ಯ ಮಾಪನದ ಉತ್ತರ ಪತ್ರಿಕೆಯನ್ನು ಹೆತ್ತವರಿಗೆ ನೀಡಲಾಯಿತು. ಅಲ್ಲದೆ ಮಕ್ಕಳ ಕಲಿಕಾ ಮಟ್ಟದ ಬಗ್ಗೆ ವಿವರಿಸಿ ಹೇಳಲಾಯಿತು. ಮಕ್ಕಳ ಬಗ್ಗೆ ಹೆಚ್ಚಿನ ಜವಾಬ್ದಾರಿಯನ್ನು ವಹಿಸುವಂತೆ ತಿಳಿಸಲಾಯಿತು. ಕಲಿಕಾ ಅಭಿವೃದ್ದಿ ದಾಖಲೆಗೆ ಹೆತ್ತವರ ಸಹಿ ಪಡೆಯಲಾಯಿತು.ಹೆತ್ತವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.
Monday, 29 September 2014
Monday, 15 September 2014
ಸುರಕ್ಷಾ ವಿಮಾ ಯೋಜನೆಯ ಉದ್ಘಾಟನೆ
ರೋಟರಿ ಕ್ಲಬ್ ಮಂಗಳೂರು ಹಾಗೂ ಎಸ್. ಎ. ಟಿ.ಪ್ರೌಢ ಶಾಲೆಯ ರಕ್ಷಕ – ಶಿಕ್ಷಕ ಸಂಘ ಇದರ ಜಂಟಿ ಆಶ್ರಯದಲ್ಲಿ ಮಕ್ಕಳ ಸುರಕ್ಷಾ ವಿಮಾ ಯೋಜನೆಯ ಉದ್ಘಾಟನೆಯನ್ನು ರೋಟರಿ ಕ್ಲಬ್ ಮಂಗಳೂರು ಇದರ ಅಧ್ಯಕ್ಷರಾದ ಏಕನಾಥ ದಂಡೇರಿ ಅವರು ವಿಮಾ ಯೋಜನೆಯ ಅವಶ್ಯಕತೆ ಮತ್ತು ಪ್ರಯೋಜನದ ಬಗ್ಗೆ ವಿವರವನ್ನು ನೀಡಿ , ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಸುದತಿ.ಬಿ ಇವರಿಗೆ ಔಪಚಾರಿಕವಾಗಿ ವಿಮಾ ಪಾಲಿಸಿ ನೀಡುವುದರ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರೌಢ ಶಾಲಾ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾದ ನಿತಿನ್ ಚಂದ್ರ ಪೈ, ಕಿರಿಯ ಪ್ರಾಥಮಿಕ ಶಾಲೆಯ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾದ ಪುತ್ತಬ್ಬ ಕುಂಜತ್ತೂರು, ಮಂಜೇಶ್ವರ ಗ್ರಾಮಪಂಚಾಯತ್ ಸದಸ್ಯರಾದ ಹರಿಶ್ಚಂದ್ರ , ಎಂ ವಿಠಲ ದಾಸ್ ಭಟ್, ಅನಿಲ್ ಬಾಳಿಗ, ಸಲಹಾ ಸಮಿತಿ ಸದಸ್ಯೆ ಲಿಲ್ಲಿ ಬಾಯಿ ಟೀಚರ್ ಮುಂತಾದವರು ಉಪತ್ಥಿತರಿದ್ದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯನಿ ಮನೋರಮ ಕಿಣಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಸುದತಿ.ಬಿ ವಂದಿಸಿದರು. ಶಿಕ್ಷಕ ವಿರೇಶ್ವರ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.
Thursday, 11 September 2014
ಆಧುನಿಕತೆಯತ್ತ ತರಗತಿ ಕೋಣೆಗಳು.......
ನೂತನ ಪ್ರೋಜೆಕ್ಟರ್ ಮತ್ತು ಕ್ಯಾಮರ ಹಸ್ತಾಂತರ
ಎಸ್. ಎ.ಟಿ ಶಾಲೆಯ ಹಳೆ ವಿದ್ಯಾರ್ಥಿಯಾಗಿರುವ ಅಪ್ಪುಸ ಅಲಿಯಾಸ್ ರಾಧ ಪೈ ತಮ್ಮ ಪತಿಯವರಾದ ದಿI ಶ್ರೀ ಕೆ. ಪಾಂಡುರಂಗ ಕಾಮತ್ ರವರ ಸ್ಮರಣಾರ್ಥಕವಾಗಿ ನೀಡಿದ ನೂತನ ಪ್ರೊಜೆಕ್ಟರ್ ಮತ್ತು ಕ್ಯಾಮರ ಹಸ್ತಾಂತರ ಕಾರ್ಯಕ್ರಮವು ಎಸ್. ಎ. ಟಿ ಶಾಲೆಯ ಅನಂತ ವಿಧ್ಯಾ ಸಭಾಂಗಣದಲ್ಲಿ ಇತ್ತೀಚೆಗೆ ಜರಗಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತ್ ಅನಂತೇಶ್ವರ ದೇವಳದ ಕೋಶಾಧಿಕಾರಿಯಾದ ಸುರೇಶ್ ಶೆಣೈ ವಹಿಸಿದರು. ಈ ಸಂದರ್ಭದಲ್ಲಿ ಶಾಲಾ ಪ್ರಬಂಧಕರಾದ ದಿನೇಶ್ ಶೆಣೈ ಅವರು ದಾನಿ 90 ವರ್ಷಪ್ರಾಯದ ಅಪ್ಪುಸ ಅಲಿಯಾಸ್ ರಾಧ ಪೈ ಅವರನ್ನು ಸನ್ಮಾನಿಸಿದರು. ಪ್ರೌಢ ಶಾಲಾ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾದ ನಿತಿನ್ ಚಂದ್ರ ಪೈ, ಕಿರಿಯ ಪ್ರಾಥಮಿಕ ಶಾಲೆಯ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾದ ಪುತ್ತಬ್ಬ ಕುಂಜತ್ತೂರು, ಮಂಜೇಶ್ವರ ಗ್ರಾಮಪಂಚಾಯತ್ ಸದಸ್ಯರಾದ ಹರಿಶ್ಚಂದ್ರ , ಎಂ. ವಿಠಲ ದಾಸ್ ಭಟ್, ಅನಿಲ್ ಬಾಳಿಗ, ಸಲಹಾ ಸಮಿತಿ ಸದಸ್ಯೆ ಲಿಲ್ಲಿ ಬಾಯಿ ಟೀಚರ್ ಮುಂತಾದವರು ಉಪಸ್ಥಿತರಿದ್ದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯನಿ ಮನೋರಮ ಕಿಣಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಸುದತಿ.ಬಿ ವಂದಿಸಿದರು. ಶಿಕ್ಷಕ ವಿರೇಶ್ವರ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.
Monday, 8 September 2014
Subscribe to:
Posts (Atom)
-
ತರಗತಿಯ ರಕ್ಷಕ – ಶಿಕ್ಷಕ ಸಂಘದ ಸಭೆಗಳು 30.09.2014 ರಂದು ಜರಗಿತು. ಎಲ್ಲಾ ತರಗತಿಯಲ್ಲೂ ಆಯಾ ತರಗತಿ ಅಧ್ಯಾಪಕರು ಸಭೆಯ ನೇತೃತ್ವವನ್ನು ವಹಿಸಿದ...