Tuesday 30 September 2014

ನಾಡ ಹಬ್ಬ ದಸರಾ ಆಚರಣೆ


         
            ನಾಡ ಹಬ್ಬ ದಸರಾ ವನ್ನು ಬಹಳ ವಿಜೃಭಣೆಯಿಂದ ಆಚರಿಸಲಾಯಿತು. ಮಂಜೇಶ್ವರದ ಶ್ರೀಮತ್ ಅನಂತೇಶ್ವರ ದೇವಳದ ಕೋಶಾಧಿಕಾರಿಯಾದ ಸುರೇಶ್ ಶೆಣೈ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರೌಢ ಶಾಲಾ ವಿಭಾಗದ ಪ್ರಭಾರ ಮುಖ್ಯೋಪಾಧ್ಯಾಯಿನಿ ಕೆ. ಕೃಷ್ಣ ಕುಮಾರಿ ಟೀಚರ್ ಅಧ್ಯಕ್ಷತೆ ವಹಿಸಿದರು. ವಿದ್ಯಾರ್ಥಿಗಳಿಂದ ಕುವೆಂಪು ರಚಿಸಿದ ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಕ್ಕಳಿಂದ ವಿವಿಧ ರೀತಿಯ ವಿನೋದಾವಳಿಗಳು ನಡೆಯಿತು. ಸಂದರ್ಭದಲ್ಲಿ ಪ್ರೌಢ ಶಾಲಾ ರಕ್ಷಕಶಿಕ್ಷಕ ಸಂಘದ ಅಧ್ಯಕ್ಷರಾದ ನಿತಿನ್ ಚಂದ್ರ ಪೈ , ಶಾಲಾ ಆಡಳಿತ ಮಂಡಳಿಯ ಸಲಹ ಸಮಿತಿಯ ಸದಸ್ಯೆ ಲಿಲ್ಲಿ ಬಾಯಿ ಟೀಚರ್ , ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಸುದತಿ ಟೀಚರ್, ವಿದ್ಯಾರಂಗ ಸಾಹಿತ್ಯ ವೇದಿಕೆಯ ಸಂಚಾಲಕರಾದ ಪರಮೇಶ್ವರಿ ಟೀಚರ್, ಶಾಲಾ ನಾಡಹಬ್ಬದ ಸಂಯೋಜಕರಾದ ಕಿರಣ್ ಕುಮಾರ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯಾದ ಕುಮಾರಿ ನಿಶ್ಮಿತ ಸ್ವಾಗತಿಸಿದಳು, ಕುಮಾರಿ ಆಯಿಷತ್ ಸಫ್ ವಾನ ಕಾರ್ಯಕ್ರಮವನ್ನು ನಿರೂಪಿಸಿದಳು.

1 comment:

  1. ಹೃತ್ಪೂರ್ವಕ ಅಭಿನಂದನೆಗಳು

    ReplyDelete

ಗಣರಾಜ್ಯೋತ್ಸವ