05.06.2015 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಬೆಳಗ್ಗೆ 10 ಗಂಟೆಗೆ ಸರಿಯಾಗಿ ಅಸೆಂಬ್ಲಿ ಸೇರಲಾಯಿತು. ಮುಖ್ಯೋಪಾಧ್ಯಾಯಿನಿ ಸುದತಿ ಬಿ. ಪರಿಸರ ದಿನದ ಮಹತ್ವವನ್ನು ತಿಳಿಸಿ ಗಿಡಗಳನ್ನು ಉಳಿಸಿ-ಬೆಳೆಸಬೇಕಾದ ಅನಿವಾರ್ಯತೆಯನ್ನು ತಿಳಿಸಿದರು. ಅಧ್ಯಾಪಕ ಮಹೇಶ ಕೆ. ಪರಿಸರಗೀತೆಯನ್ನು ಹಾಡಿಸಿದರು. ಮಕ್ಕಳು ಉತ್ಸಾಹದಿಂದ ಹಾಡಿದರು. ನಂತರ ಪರಿಸರ ಉಳಿಸಿ ಬೆಳೆಸುವ ಪ್ರತಿಜ್ಞೆಯನ್ನು ಬೋಧಿಸಲಾಯಿತು. ಬಳಿಕ ಸುದತಿ ಟೀಚರ್ ಗಿಡಗಳನ್ನು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ಅಪರಾಹ್ನ 3 ಗಂಟೆಗೆ ಸರಿಯಾಗಿ ಮೂರು ಮತ್ತು ನಾಲ್ಕನೇ ತರಗತಿಯ ಎಲ್ಲಾ ಮಕ್ಕಳಿಗೆ ಸರಕಾರದಿಂದ ಒದಗಿಸಲ್ಪಟ್ಟ ಗಿಡಗಳನ್ನು ವಿತರಿಸಲಾಯಿತು. ಗಿಡಗಳನ್ನು ನೆಟ್ಟು ಬೆಳೆಸುವ ಜವಾಬ್ದಾರಿಯ ಬಗ್ಗೆ ತಿಳಿ ಹೇಳಲಾಯಿತು. ಶಾಲಾ ಪರಿಸರದಲ್ಲಿ ಕೆಲವು ಗಿಡಗಳನ್ನು ನೆಡಲಾಯಿತು.ಗಿಡಗಳನ್ನು ನೋಡಿಕೊಳ್ಳಲು ನಾಲ್ಕನೇ ತರಗತಿ ಮಕ್ಕಳಿಗೆ ಜವಾಬ್ದಾರಿ ವಹಿಸಲಾಯಿತು.
No comments:
Post a Comment