26.06.2015ರಂದು ಮಾದಕದ್ರವ್ಯ ವಿರೋಧಿ ದಿನವನ್ನು ಆಚರಿಸಲಾಯಿತು. ಅಪರಾಹ್ನ 3 ಗಂಟೆಗೆ ಸಭಾಂಗಣದಲ್ಲಿ ಅಸೆಂಬ್ಲಿ ಸೇರಲಾಯಿತು. ಅಸೆಂಬ್ಲಿಯಲ್ಲಿ ಅಧ್ಯಾಪಕ ಮಹೇಶ ಕೆ. ಪ್ರತಿಜ್ಞೆ ಬೋಧಿಸಿದರು. ಮುಖ್ಯೋಪಾಧ್ಯಾಯಿನಿ ಸುದತಿ ಬಿ. ಮಾದಕ ದ್ರವ್ಯದಿಂದ ಉಂಟಾಗುವ ತೊಂದರೆಗಳನ್ನು ವಿವರಿಸಿದರು ಹಾಗೂ ಅದರಿಂದ ದೂರವಿರುವಂತೆ ಕರೆ ನೀಡಿದರು. ಮಕ್ಕಳಿಗೆ ಪ್ರೋಜೆಕ್ಟರ್ ಮೂಲಕ ಮಾದಕವಸ್ತುಗಳು ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳನ್ನು ವಿವರಿಸಲಾಯಿತು.
No comments:
Post a Comment