Saturday, 26 July 2014

ಅರಳುತ್ತಿರುವ ಪ್ರತಿಭೆ

ಎಲ್. ಎಸ್.ಎಸ್ ಪರೀಕ್ಷೆ


              2013-14 ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಎಲ್. ಎಸ್.ಎಸ್ ಪರೀಕ್ಷೆಯಲ್ಲಿ ಎಸ್.. ಟಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ದೀಪಕ್ ರಾಜ್ ತೆರ್ಗಡೆ ಹೊಂದಿರುವನು.ಈತ ಸರಸ್ವತಿ ಎ೦ಬವರ ಪುತ್ರ.

ಹಚ್ಚಹಸುರಿನೆಡೆಗೆ ಶಾಲಾ ಪರಿಸರ

ವಿಶ್ವ ಪರಿಸರ ದಿನಾಚರಣೆ

     
              5.6.14. ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಬೆಳಗ್ಗೆ 9.30 ಕ್ಕೆ ಸರಿಯಾಗಿ ಅಸೆಂಬ್ಲಿ ಸೇರಲಾಯಿತು. ಅಸೆಂಬ್ಲಿಯಲ್ಲಿ ಪರಿಸರ ದಿನಾಚರಣೆಯ ಸಂದೇಶವನ್ನು ಮುಖ್ಯೋಪಾಧ್ಯಾಯಿನಿಯಾದ ಸುದತಿ ಬಿ ನೀಡಿದರು. ಪರಿಸರವನ್ನು ಸಂರಕ್ಷಿಸುವ ಅವಶ್ಯಕತೆಯನ್ನು ತಿಳಿಸಿದರು.ನಂತರ ಪ್ರತಿ ತರಗತಿಯಲ್ಲೂ ಗಿಡವನ್ನು ನೇಡುವುದರ ಮಹತ್ವವನ್ನು ತಿಳಿಸಲಾಯಿತುಅಪರಾಹ್ನ ಶಾಲಾ ಪರಿಸರದಲ್ಲಿ ಗಿಡಗಳನ್ನು ನೇಡಲಾಯಿತು. 4ನೇ ತರಗತಿಯ ವಿದ್ಯಾರ್ಥಿಗಳು ಅಧ್ಯಾಪಕರೊಡನೆ ಸೇರಿ ಗಿಡಗಳನ್ನು ನೆಟ್ಟರು.ಆ ಗಿಡಗಳನ್ನು ನೋಡಿಕೊಳ್ಳಲು ವಿದ್ಯಾರ್ಥಿಗಳ ಗುಂಪುಗಳನ್ನು ರಚಿಸಲಾಯಿತು. ಘೋಷಣಾ ವಾಕ್ಯಗಳನ್ನು ಹಿಡಿದು ಮಕ್ಕಳು ಮೆರವಣಿಗೆಯಲ್ಲಿ ಸಾಗಿದರುನಂತರ ಮುಖ್ಯೋಪಾಧ್ಯಾಯಿನಿಯಾದ ಸುದತಿ ಬಿ ಗಿಡಗಳ ವಿತರಣೆಗೆ ಚಾಲನೆಯನ್ನು ನೀಡಿದರು. ಎಲ್ಲಾ ಮಕ್ಕಳಿಗೂ ಗಿಡಗಳನ್ನು ವಿತರಿಸಲಾಯಿತು. ಗಿಡಗಳನ್ನು ನೆಟ್ಟು ಬೆಳೆಸಲು ತಿಳಿಸಲಾಯಿತು.

ಹರ್ಷೋಲ್ಲಾಸದೊಂದಿಗೆ ಪ್ರಾರಂಭ

ಪ್ರವೇಶೋತ್ಸವ

       
            2.6.2014 ಸೋಮವಾರ ಮಂಜೇಶ್ವರ ಪಂಚಾಯತ್ ಮಟ್ಟದ ಪ್ರವೇಶೋತ್ಸವ ಎಸ್. .ಟಿ.ಎಲ್.ಪಿ. ಶಾಲೆಯಲ್ಲಿ ಯಶಸ್ವಿಯಾಗಿ ಜರಗಿತು. ಬೆಳಗ್ಗೆ 10 ಗಂಟೆಗೆ ಸರಿಯಾಗಿ ಅಸಂಬ್ಲಿ ಸೇರಲಾಯಿತು. ಸರಕಾರದ ಪ್ರತಿಜ್ಞೆಯನ್ನು ಬೋಧಿಸಲಾಯಿತು. ನಂತರ ಹೊಸತಾಗಿ ಶಾಲೆಗೆ ಸೇರಿದ ಮಕ್ಕಳನ್ನು ಶಾಲಾ ಪರಿಸರದಿಂದ ಮೆರವಣಿಗೆಯಲ್ಲಿ ಕರೆತರಲಾಯಿತು.ಸ್ಕೌಟ್ ಮತ್ತು ಗೈಡ್ ನ ವಿದ್ಯಾರ್ಥಿಗಳು ಹಾಗೂ ಬ್ಯಾಂಡ್ ಸೆಟ್ ಮೆರವಣಿಗೆಗೆ ವಿಶೇಷ ಕಳೆನೀಡಿತು.ಅಧ್ಯಾಪಕರು, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರು ಗಣ್ಯ ಅತಿಥಿಗಳು ಉಪಸ್ಥಿತರಿದ್ದರುಬಳಿಕ ಅನಂತ ವಿದ್ಯಾ ದಲ್ಲಿ ಸಭಾ ಕಾರ್ಯಕ್ರಮ ಜರಗಿತು. ವಾರ್ಡು ಸದಸ್ಯ ಆನಂದ ಮಾಸ್ತರ್ ಉದ್ಘಾಟಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಮನೋರಮ ಕಿಣಿ ಸ್ವಾಗತಿಸಿದರು. ಬಿ.ಆರ್ .ಸಿ ತರಬೇತಿದಾರರಾದ ರಮ್ಯ ಪ್ರಾಸ್ತವಿಕ ನುಡಿಗಳನ್ನಾಡಿದರು.ಅಧ್ಯಾಪಕರು ಪ್ರವೇಶೋತ್ಸವ ಗೀತೆಯನ್ನು ಹಾಡಿದರು. ಲಿಲ್ಲಿ ಬಾಯಿ ಟೀಚರ್ ಮಕ್ಕಳಿಗೆ ಆಸಕ್ತಿದಾಯಕವಾದ ಚಟುವಟಿಕೆಗಳನ್ನು ನೀಡಿದರು. ಹೊಸದಾಗಿ ಸೇರಿದ ಮಕ್ಕಳಿಗೆ ಹೂ, ಬೆಲೂನ್ ಗಳನ್ನು ನೀಡಲಾಯಿತು.ಒಂದನೇ ತರಗತಿಯ ಮಕ್ಕಳಿಗೆ ಉಚಿತ ಪೆನ್ಸಿಲ್ , ರಬ್ಬರ್ , ಸ್ಕೇಲ್ , ಸ್ಲೇಟ್, ಚಿತ್ರ ಪುಸ್ತಕ ಇತ್ಯಾದಿಗಳನ್ನು ಒಳಗೊಂಡ ಕಿಟ್ ನ್ನು ವಿತರಿಸಲಾಯಿತು.ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಮುಷರತ್ ಜಹಾನ್ ಅಧ್ಯಕ್ಷತೆ ವಹಿಸಿದರು.ಶಾಲಾ ಪ್ರಬಂಧಕರಾದ ಶ್ರೀಯುತ ದಿನೇಶ್ ಶೆಣೈ , ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀಯುತ ಪುತ್ತಬ್ಬ ಕುಂಜತ್ತೂರು ಮತ್ತು ಬಿ. ಆರ್.ಸಿ ತರಬೇತಿದಾರರಾದ ಶ್ರೀಮತಿ ಉಷಾ ಟೀಚರ್ ಉಪಸ್ಥಿತರಿದ್ದು ಶುಭ ಹಾರೈಸಿದರು.ಮುಖ್ಯೋಪಾಧ್ಯಾಯಿನಿಯಾದ ಸುದತಿ ಟೀಚರ್ ಧನ್ಯವಾದವನ್ನು ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಯನ್ನು ಹಂಚಲಾಯಿತು. ಶ್ರೀಯುತ ವಿರೇಶ್ವರ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.

ಗಣರಾಜ್ಯೋತ್ಸವ